ಕುಮಟಾ : ತಾಲೂಕಿನ ಮಿರ್ಜಾನ ರಾಮನಗರದಲ್ಲಿ ಕಾಣಿಸಿಕೊಂಡ ಬಲು ಅಪರೂಪದ ಬಳಿ ಹೆಬ್ಬಾವನ್ನು ಉರಗ ತಜ್ಞ ಪವನ ನಾಯ್ಕರು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.
ಸ್ಥಳಕ್ಕಾಗಮಿಸಿದ ಪವನ್ ಅವರು, ಈ ಬಳಿ ಹಾವು ಹೆಬ್ಬಾವನ್ನು ಸಲೀಸಾಗಿ ಹಿಡಿದು. ಹೆಬ್ಬಾವನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.
ಮಿರ್ಜಾನ್ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಳಿ ಹಾವು ಪ್ರತ್ಯಕ್ಷಗೊಂಡು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತ್ತು. ಬಳಿಕ ಈ ಬಗ್ಗೆ ಉರಗ ತಜ್ಞ ಪವನ್ ಎಮ್ ನಾಯ್ಕ ಅವರಿಗೆ ತಿಳಿಸಲಾಗಿದೆ.

ಇನ್ನು ಈ ಹಾವಿನ ಬಗ್ಗೆ ಮಾಹಿತಿ ನೀಡಿದ ಪವನ್, ಇಂತಹ ಹಾವುಗಳು ಬೇರೆಯ ಜಾತಿಯ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ನ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ.
ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ. ಆದರೆ ಅಲ್ಬಿನೋ ಹಾವುಗಳಾದರೆ ಕಣ್ಣು ಸಹ ಕೆಂಪು ಮಿಶ್ರಿತ ಬಳಿ ಒಣ್ಣ ಇರಬೇಕಾಗುತ್ತದೆ. ಇದರ ಕಣ್ಣು ಅರ್ಧ ಮಾತ್ರ ಬಿಳಿ ಇದ್ದು ಇನ್ನರ್ಧ ಕಪ್ಪಿರೋ ಕಾರಣ ಇದನ್ನು ಅಲ್ಬಿನೋ ಹಾವಿನ ಗುಂಪಿಗೆ ಸೇರಿಲು ಸಾಧ್ಯವಿಲ್ಲ. ಆದರೂ ಇದು ಕರ್ನಾಟಕದಲ್ಲಿ ಸಿಕ್ಕಿರೋ 2 ನೇ ದಾಖಲೆ ಹಾಗೂ ಹಾವನ್ನು ಸುರಕ್ಷಿತ ಜಾಗಕ್ಕೆ ಬಿಡಲಾಗಿದೆ ಎಂದರು.
Leave a Comment