ಸುದ್ದಿವಾಹಿನಿ ಕಾರು ಚಾಲಕ ಬಂಧನ
ಬೆಂಗಳೂರು: ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರ ಣದಲ್ಲಿ ಆರೋಪಿಗಳಾದ ಮನೋಜ್ (29) ಹಾಗೂ ಸುರೇಶ್ (25) ಎಂಬುವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮಂಡ್ಯ ಜಿಲ್ಲೆಯ ಮನೋಜ್, ರಾಜ್ಯಮಟ್ಟದ ಸುದ್ದಿವಾಹಿನಿಯೊಂದರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ, ಸ್ನೇಹಿತ ಸುರೇಶ್ ಸಹಾಯದಿಂದ ಕೃತ್ಯ ಎಸಗಿದ್ದ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಕೂ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನೂ ಬಂಧಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
10 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಆರೋಪಿ ಮನೋಜ್ ಪರಿಚಯ ಮಾಡಿಕೊಂಡಿದ್ದ. ಸ್ನೇಹ ಬೆಳೆಸಿ, ಆಗಾಗ ಭೇಟಿಯಾಗುತ್ತಿದ್ದ. ಕನಕಪುರದ ಕಬ್ಬಾಳಮ್ಮ ದೇವಸ್ಥಾನಕ್ಕೆ ಹೋಗೋಣವೆಂದು ಬಾಲಕಿಯನ್ನು ಪುಸಲಾಯಿಸಿದ್ದ. ಆತನ ಮಾತು ನಂಬಿದ್ದ ಬಾಲಕಿ, ದೇವಸ್ಥಾನಕ್ಕೆ ದಾಖಲಾಗಿದೆ. ಹೋಗಲು ಒಪ್ಪಿದ್ದಳು.’
‘ಆಗಸ್ಟ್. 26ರಂದು ಆರೋಪಿ ಬಾಲಕಿಯನ್ನು ತನ್ನ ಬಳಿ ಕರೆಸಿಕೊಂಡಿದ್ದ. ದೇವಸ್ಥಾನಕ್ಕೆ ತೆರಳದ ಆರೋಪಿ, ಬನ್ನೇರುಘಟ್ಟ ಬಳಿಯ ಮನೆಯೊಂದಕ್ಕೆ ಬಾಲಕಿಯನ್ನು ಕರೆದೊಯ್ದಿದ್ದ. ಅದೇ ಮನೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಂಜೆಯಾದರೂ ಬಾಲಕಿ ಮನೆಗೆ ವಾಪಸು ಹೋಗಿರಲಿಲ್ಲ. ಗಾಬರಿಗೊಂಡ ಪೋಷಕರು, ಬಾಲಕಿ ನಾಪತ್ತೆ ಬಗ್ಗೆ ಠಾಣೆಗೆ ದೂರು ನೀಡಿದ್ದರು ಎಂದೂ ಮೂಲಗಳು ತಿಳಿಸಿವೆ.
ಅಪಹರಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಬಾಲಕಿ ಯನ್ನು ಪತ್ತೆ ಮಾಡಲಾಯಿತು. ತನ್ನ ಮೇಲೆ ಲೈಂಗಿಕ ದರ್ಜನ್ಯ ನಡೆದಿರುವಾಗಿ ಬಾಲಕಿ ಹೇಳಿಕೆ ನೀಡಿದ್ದಾಳೆ. ಪೋಕ್ಸೊ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಿಸಲಾಗಿದೆ. ಎಂದೂ ಪೊಲೀಸ್ ಮೂಲಗಳು ಹೇಳಿವೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು: ಡ್ರಾಪ್ ನೀಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗುತ್ತಿದ್ದು, ಈ ಸಂಬಂಧ ವಿವೇಕನಗರ ಠಾಣೆಯಲ್ಲಿ ಎಫ್ಐಆ
‘ಬುಧವಾರ ರಾತ್ರಿ ನಡೆದಿರುವ ಕೃತ್ಯದ ಬಗ್ಗೆ 25 ವರ್ಷದ ಯುವತಿ ದೂರು ನೀಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
“ನಗರದ ನಿವಾಸಿಯಾಗಿರುವ ಯುವತಿ ಈಜಿಪುರ ಬಳಿ ಹೊರಟಿದ್ದರು. ಡ್ರಾಪ್ ನೀಡುವ ನೆಪದಲ್ಲಿ ಅವರನ್ನು ಬೈಕ್ನಲ್ಲಿ ಹತ್ತಿಸಿಕೊಂಡಿದ್ದ ಆರೋಪಿಗಳು, ಹುಸ್ಕೂರು ಬಳಿ ಕರೆದೊಯ್ದಿದ್ದರು. ಇಬ್ಬರೂ ಆರೋಪಿಗಳು ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಂತರ ವಿಷಯವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದರು. ಗುರುವಾರ ಠಾಣೆಗೆ ಯುವತಿ ದೂರು ನೀಡಿದ್ದಾರೆ’ ಎಂದು ತಿಳಿಸಿವೆ.
‘ಆರೋಪಿಗಳು ಕಂಪನಿಯೊಂದರ ಕ್ಯಾಬ್ ಚಾಲಕರೆಂದು ಗೊತ್ತಾಗಿದೆ’ ಎಂದು ಮೂಲಗಳು ಹೆಳಿವೆ.
Leave a Comment