ಬೆಂಗಳೂರು: ಪ್ರಾಣಿಗಳ ಮೇಲೆ ದೌರ್ಜನ್ಯ ವರದಿಯಾದರೆ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗವುದು ಎಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ರಾಜ್ಯಾದ್ಯಂತ ಪ್ರಾಣಿಗಳ ಮೇಲೆ ದೌರ್ಜನ್ಯ ಮತ್ತು ಕ್ರೌರ್ಯಗಳು ಹೆಚ್ಚಾಗುತ್ತಿದ್ದು, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ, ಬೀದಿ ನಾಯಿಗಳ ಆರೈಕೆದಾರರು ಹಾಗೂ ಫೀಡರ್ಸ್ಗಳಿಗೆ ವಿವಿಧ ದೂರುಗಳು ದಾಖ ಲಾಗುತ್ತಿದ್ದು ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1960 ರ ಪ್ರಕಾರ ಪ್ರಾಣಿಗಳಿಗೆ ನೋವು, ಯಾತನೆ, ದೌರ್ಜನ್ಯ ಮಾಡುವುದು ನಿಷಿದ್ಧ ಹಾಗೂ ಭಾರತೀಯ ದಂಡ ಸಂಹಿತೆ ಅನುಚ್ಛೇದ 428 ಮತ್ತು 429 ರ ಪ್ರಕಾರ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾ ಗುವುದು.
ದೂರುಗಳಿದ್ದಲ್ಲಿ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂ 112 ಅಥವಾ ಪಶುಸಂಗೋಪನಾ ಸಹಾಯವಾಣಿ ಸಂಖ್ಯೆ 8277100200 ಗೆ ಸಂಪರ್ಕಿಸುವುದು ಎಂದು ತಿಳಿಸಿದೆ.
Leave a Comment