• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪೋಸ್ಟ ಮೂಲಕ ತಂದೆಗೆ ವರದಿಯ ಪ್ರತಿ ಕಳುಹಿಸಿದ ಸಿಬಿಐ;ಪರೇಶ್ ಮೇಸ್ತಾ ಪ್ರಕರಣ : ಸಿಬಿಐನಿಂದ ಬಿ ರಿಪೋರ್ಟ್…!

October 4, 2022 by Deepika Leave a Comment

ಹೊನ್ನಾವರ : ಕಳೆದ ಐದು ವರ್ಷಗಳ ಹಿಂದೆ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದನೆನ್ನಲಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಅಂತೂ ಬಿ ರಿಪೋರ್ಟ್ ಸಲ್ಲಿಸಿದೆ!

2017ರ ಡಿಸೆಂಬರ್ 6 ರಂದು ಪಟ್ಟಣದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಜಿಜೆಪಿ ಹಾಗೂ ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿAದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

wp 1664879762513

ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಪ್ರಕರಣದಲ್ಲಿ ಸಿಬಿಐಗೆ ವಹಿಸಿತ್ತು. ಐವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ವಿಸ್ತೃತ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಸಿಬಿಐ ಸಲ್ಲಿಸಿರುವ ವರದಿಯಲ್ಲಿ ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಇದೊಂದು ಆಕಸ್ಮಿಕ ಸಾವು ಎಂದು ಅಭಿಪ್ರಾಯಿಸಲಾಗಿದೆ.

ಸೋಮವಾರ ಸಿಬಿಐ ಸಲ್ಲಿಸಿರುವ ವರದಿ ಪರಿಶೀಲಿಸಿದ ಸ್ಥಳೀಯ ನ್ಯಾಯಾಲಯ, ನವೆಂಬರ್ 16 ಕ್ಕೆ ತೀರ್ಪು ಮುಂದೂಡಿಕೆ ಮಾಡಿದೆ. ಈ ಮೂಲಕ ಹತ್ಯೆ ಎಂದು ಬೆಂಬಿಸಿ ರಾಜಕೀಯ ಲಾಭ ಪಡೆದಿದ್ದ ಬಿಜೆಪಿಗೆ ಭಾರೀ ಮುಖಭಂಗವಾದAತಾಗಿದೆ.

ಹೊನ್ನಾವರ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ. ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನಿವೂ ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊAಡಿದೆ.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ

ಜಾರಿಗೆ ತಂದ ಯೋಜೆಗಳು ಹಾಗೂ ಜನಸೇವೆಯನ್ನು ಮುಂದಿಟ್ಟುಕೊAಡು ರಾಜಕಾರಣ ಮಾಡಬೇಕೆ ಹೊರತು, ಅಮಾಯಕರ ಸಾವನ್ನು ಕೋಮುಗಲಭೆಯಾಗಿ ಪರಿವರ್ತಿಸಿ ರಾಜಕಾರಣ ಮಾಡಬಾರದು. ಬಿಜೆಪಿಗರು ಸಹಜ ಸಾವನ್ನು ಕೋಮು ಗಲಭೆಯಾಗಿ ಪರಿವರ್ತಿಸಿ 2018ರ ಚುನಾವಣೆಯನ್ನು ಗೆದ್ದಿದ್ದಾರೆ. ಆದರೆ ಈಗ ಜಿಲ್ಲೆಯ ಜನರಿಗೆ ಸತ್ಯ ತಿಳಿದಿದೆ. ಈ ಸತ್ಯಾಂಶದಿAದ ಬಿಜೆಪಿಯು ಮುಂದಿನ ಚುನಾವಣೆಯಲ್ಲಿ ಪಾಠ ಕಲಿಯಲಿದೆ.

ಸತೀಶ್ ಸೈಲ್, ಕಾರವಾರ ಕ್ಷೇತ್ರದ ಮಾಜಿ ಶಾಸಕ

ಸಿಬಿಐ ನೀಡಿದ ವರದಿ ನನಗೆ ಅಸಮಾಧಾನವಿದೆ: ಕಮಲಾಕರ ಮೇಸ್ತಾ

ನನ್ನ ಮಗನ ಸಾವಿನ ಬಗ್ಗೆ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನನಗೆ ಅಸಮಾಧಾನವಿದೆ ಎಂದು ಪರೇಶ್ ಮೇಸ್ತಾ ತಂದೆ ಕಮಲಾಕರ ಮೆಸ್ತಾ ತಿಳಿಸಿದ್ದಾರೆ. ‘ನುಡಿಜೇನು’ ಪತ್ರಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಬಿಐನವರು ನನ್ನ ಮಗನ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ಹೇಳಿದ್ದಾರೆ. ಈ ಬಗ್ಗೆ ತಿಳಿಸಲು ನನಗೆ ಕುಮಟಾದ ಐಬಿಗೆ ಕರೆಸಿ ಮಾಹಿತಿ ನೀಡಿದ್ದು, ತಮ್ಮ ವರದಿಗೆ

ನನ್ನಗೆ ಸಹಿ ಹಾಕಲು ತಿಳಿಸಿದಾಗ ನಾನು ಒಪ್ಪಲಿಲ್ಲ. ಅದಕ್ಕಾಗಿ ನನ್ನ ಮನೆಗೆ ಪೋಸ್ಟ್ ಮೂಲಕ ವರದಿಯನ್ನ ಕಳುಹಿಸಿದ್ದಾರೆ ಎಂದಿದ್ದಾರೆ. ನನಗೆ ಪೊಲೀಸರು ತನೀಕೆ ಮೇಲೂ ಅಸಮಾಧಾನವಿತ್ತು.

ಈಗ ಸಿಬಿಐ ನೀಡಿದ ವರದಿ ಸಹ ಅಸಮಾಧಾನ ತಂದಿದೆ. ಸಿಬಿಐ ನವರು ಕಳಸಿದ ವರದಿಯನ್ನ ಇನ್ನೂ ತೆರೆಯದೇ ಹಾಗೇ ಇಟ್ಟದ್ದು, ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಲ್ಲರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳದ್ದಾರೆ.

wp 1664879624330

ಸಿಬಿಐ ಹೇಳಿರುವುದೇನು

ಪಪೇಶ್ ಮೇಸ್ತಾ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಆರೋಪಿಗಳ ಒಳಗೊಳ್ಳುವಿಕೆಯನ್ನು ತೋರಿಸುವ ಯಾವುದೇ ದೋಷಾರೋಪಣೆಯ ಪುರಾವೆಗಳು ಗೋಚರಿಸಿಲ್ಲ.

ಅನೇಕ ಸಂಸ್ಥೆಗಳಿAದ ಸಂಗ್ರಹಿಸಲಾದ ವೈದ್ಯಕೀಯ ಕಾನೂನು ಪುರಾವೆಗಳು/ಅಭಿಪ್ರಾಯವು ಪರೇಶ್ ಮೇಸ್ತಾ ಸಾವಿನ ಕಾರಣವನ್ನು ಮರಣೋತ್ತರ ಮುಳುಗುವಿಕೆ ಎಂದು ಸ್ಪಷ್ಟವಾಗಿಸಿದೆ. ಅದರಂತೆ ಅಂತಿಕ ವರದಿಯನ್ನು ಪ್ರಧಾಮ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಜೂನಿಯರ್ ಡಿಎನ್) & ಜೆಎಂಎಫ್‌ಸಿ ಹೊನ್ನಾವರಕ್ಕೆ ಸಲ್ಲಿಸುತ್ತಿದ್ದೇವೆ.

ಶಾಲಾ ವಿದ್ಯಾರ್ಥಿ &ಕಾಲೇಜು ವಿದ್ಯಾರ್ಥಿಗಳಿಗೆ 24,000- 60,000 ವಿದ್ಯಾರ್ಥಿವೇತನ/Aditya Birla Capital Scholarship for Students 2022

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...