• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಬ್ಬು ಬೆಳೆಗರಾರ ಬೇಡಿಕೆಯನ್ನು ಸಚಿವರಿಗೆ ತಲುಪಿಸಿದ ಮಾಜಿ ಶಾಸಕ ಸುನೀಲ ಹೆಗಡೆ.

October 7, 2022 by manjunath maadaar Leave a Comment

  • Screenshot 20221007 193042 WhatsApp 1

ಹಳಿಯಾಳ : ಹಳಿಯಾಳದ ಇ.ಐ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ವಿಚಾರದಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಖಾನೆ ಹಾಗೂ ರೈತರ ಸಮ್ಮುಖದಲ್ಲಿ ಚರ್ಚಿಸಿ, ಈ ಸಾಲಿನಲ್ಲಿ ಎಫ್ ಆರ್ ಪಿ ದರವನ್ನು ರೂ.2592 ಕ್ಕಿಂತ ಹೆಚ್ಚಿಸಿ ಬಡ ರೈತರಿಗೆ ಅನುಕೂಲ ಮಾಡಿ ಕೊಡಬೇಕೆಂದು ಶುಕ್ರವಾರ ಬೆಂಗಳೂರಿನಲ್ಲಿ ಸಕ್ಕರೆ ಸಚಿವ ಶಂಕರಪಾಟಿಲ ಮುನೆನಕೊಪ್ಪ ಅವರಿಗೆ ಹಳಿಯಾಳ ಮಾಜಿ ಶಾಸಕ ಸುನೀಲ ಹೆಗಡೆ ಮನವಿ ಮಾಡಿದ್ದಾರೆ.

ಈ ಕುರಿತು ಹಳಿಯಾಳ ಮಾಧ್ಯಮಗಳಿಗೆ ಪತ್ರಿಕಾ‌ ಹೇಳಿಕೆ ನೀಡಿರುವ ಅವರು ಸಚಿವರೊಂದಿಗೆ ಈ ಬಗ್ಗೆ ಮಾತನಾಡಿದ್ದು, ಹಳಿಯಾಳ ಪ್ಯಾರಿ ಕಾರ್ಖಾನೆಯ ಅಧಿಕಾರಿಗಳು, ರೈತ ಮುಖಂಡರು ನಮ್ಮನ್ನೊಳಗೊಂಡ ಒಂದು ನಿಯೋಗಕ್ಕೆ ಧಾರವಾಡಕ್ಕೆ ಬರುವಂತೆ ಅವರು ಆಹ್ವಾನಿಸಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಸಭೆ ಸೇರಿ ರೈತರಿಗೆ ನ್ಯಾಯಯುತವಾಗಿ ಈಡೇರಬೇಕಾದ ಬೇಡಿಕೆಗಳ ಬಗ್ಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿ ರೈತರಿಗೆ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದ್ದಾರೆಂದು ಹೆಗಡೆ ತಿಳಿಸಿದರು.

ಹಳಿಯಾಳದ ಈಐಡಿ ಪ್ಯಾರಿ ಶುಗರ್ಸ್ ಪ್ರೈಲಿ ಈ ಕಾರ್ಖಾನೆಯು ಕಳೆದ ವರ್ಷ 13 ಲಕ್ಷ ಟನ್ ಕಬ್ಬು ನುರಿಸಿದ್ದು, ಕಳೆದ ಸಾಲಿನಲ್ಲಿ ಎಫ್ ಆರ್ ಪಿ ದರ ರೂ.2592 ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೊರತುಪಡಿಸಿ ನಿಗದಿಯಾಗಿತ್ತು, ಆದರೆ ಈ ವರ್ಷ ಎಫ್ ಆರ್ ಪಿ ದರವನ್ನು 2371 ರೂ. (ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೊರತುಪಡಿಸಿ) ನಿಗಧಿ ಮಾಡಿದ್ದಾರೆ.

ಆದರೆ ರಸಗೊಬ್ಬರ ದರ ಒಂದು ಚೀಲಕ್ಕೆ ರೂ.1600 ಏರಿಕೆಯಾಗಿದ್ದು, ಕೂಲಿ ಕಾರ್ಮಿಕರ ವೇತನವು ಸಹ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಎಫ್ ಆರ್ ಫಿ ದರ ಕಡಿಮೆ ನಿಗದಿಯಾಗಿರುವುದರಿಂದ ರೈತರಿಗೆ ಬಹಳ ದೊಡ್ಡ ಮಟ್ಟದಲ್ಲಿ ಆರ್ಥಿಕ ನಷ್ಟ ಉಂಟಾಗಲಿದೆ. ಅಲ್ಲದೇ ಪ್ರಮುಖವಾಗಿ ಕುಟುಂಬ ನಿರ್ವಹಣೆ ದುಸ್ತರವಾಗಲಿದೆ.
ಬೆಳೆ ಸಾಲ‌ ತೀರಿಸಲು ಆಗದೆ ಸಂಕಷ್ಟಕ್ಕೆ ರೈತ ಒಳಗಾಗಲಿದ್ದಾನೆ.


ಈ ಎಲ್ಲ ಕಾರಣಗಳಿಂದ ರೈತರು ಹಳಿಯಾಳ ತಾಲೂಕಿನಲ್ಲಿ ಕಳೆದ ವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಕಾರಣ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ರೈತರ ಬೆಂಬಲಕ್ಕೆ ನಿಂತು ರೈತರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಮಾಜಿ ಶಾಸಕ ಸುನೀಲ ಹೆಗಡೆ ಮನವಿ ಮಾಡಿದ್ದಾರೆ.

ಹಳಿಯಾಳ
ವರದಿ : ಮಂಜುನಾಥ. ಹ. ಮಾದಾರ


07-10-2022

LIC HFL ವಿದ್ಯಾಧನ್ ಯಿಂದ 20,0000 ವಿದ್ಯಾರ್ಥಿವೇತನ/lic hfl vidyadhan scholarship 2022

    Share this:

    • WhatsApp
    • Twitter
    • Facebook
    • Telegram
    • Email
    • Print

    Related News:

    Filed Under: Canara News, Haliyal News

    Explore More:

    About manjunath maadaar

    Reader Interactions

    Leave a Comment Cancel reply

    Primary Sidebar

    Subscribe via Email

    Enter your email address to subscribe to Canara Buzz and receive latest news articles by email.

    • 2,076,810 visitors

    Footer

    ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

    March 24, 2025 By Sachin Hegde

    ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

    March 7, 2025 By Sachin Hegde

    ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

    February 25, 2025 By Sachin Hegde

    ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

    February 22, 2025 By Sachin Hegde

    ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

    February 16, 2025 By Sachin Hegde

    ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

    February 8, 2025 By Sachin Hegde

    © 2025 Canara Buzz · Contributors · Privacy Policy · Terms & Conditions · Member of Digital Avatar

     

    Loading Comments...