• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಬೇಡಿಕೆ ಈಡೇರುವವರೆಗೂ ಧರಣಿ ಸತ್ಯಾಗ್ರಹ ಬಿಡುವುದಿಲ್ಲ ಕಬ್ಬು ಬೆಳೆಗಾರರ ಸಂಘ

October 7, 2022 by manjunath maadaar Leave a Comment

  • VideoCapture 20221007 193807 1

ಹಳಿಯಾಳ : ಈ.ಐ.ಡಿ ಸಕ್ಕರೆ ಕಾರ್ಖಾನೆ ಹಳಿಯಾಳ ರವರು ಕಬ್ಬುಬೆಳೆಗಾರರ ಸಂಘದ ಬೇಡಿಕೆಯನ್ನು ಈಡೇರಿಸುವವರೆಗೂ ಧರಣಿ ಸತ್ಯಾಗ್ರಹವನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು, ಕಳೆದ ಒಂದು ವಾರದಿಂದ ಹಗಲು ರಾತ್ರಿ ಪ್ರತಿಭಟನೆ ಮಾಡುತ್ತಿರುವ ರೈತರು ಗಟ್ಟಿ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ.

ಹಳಿಯಾಳದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಬೆಳಗಿನಿಂದಲೇ ಸುತ್ತ ಮುತ್ತಲಿನ ಹಳ್ಳಿಗಳಿಂದ ಸಾವಿರಾರು ರೈತರು ಬಂದು ಜಮಾವಣೆ ಆಗಿದ್ದರು. ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್ ಬೋಬಾಟಿ ಮಾತನಾಡಿ ನಮ್ಮ ಹೋರಾಟ ಬೇಡಿಕೆ ಈಡೇರುವವರೆಗೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ಒಂದನೇ ತಾರೀಕಿನಂದು ನಡೆದ ಶಾಂತಿ ಸಂಧಾನ ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕಾರವಾರ ರವರ ಮುಂದೆ ನಮ್ಮ ಬೇಡಿಕೆಗಳಿಗೆ ಒಪ್ಪಿಕೊಂಡಿದ್ದನ್ನು ಬಿಟ್ಟು, ಆ ಮಾತಿಗೆ ತಪ್ಪಿ ಕಾರ್ಖಾನೆಯನ್ನು ಮತ್ತೆ ಪ್ರಾರಂಭ ಮಾಡಿದ್ದು ನಾಚಿಕೆಗೇಡು ಎಂದು ಆರ್ಭಟಿಸಿದರು.

ಹಳೆಯ ಬಾಕಿ 305 ರೂಪಾಯಿಗಳನ್ನು ನೀಡಬೇಕು ಹಾಗೂ ಈ ಸಲ ಕಬ್ಬಿಗೆ ಹೆಚ್ಚಿನ ದರವನ್ನು ನೀಡಬೇಕು ಎಂದು ಬೆಳಗಿನಿಂದ ಸಂಜೆವರೆಗೆ ಪ್ರತಿಭಟನೆ ಮಾಡಿದಾಗ ಕೊನೆಯಲ್ಲಿ ತಾಲೂಕು ಆಡಳಿತ ಮತ್ತು ಶಿರಸಿ ಉಪ ವಿಭಾಗಾಧಿಕಾರಿಗಳು ಪ್ರತಿಭಟನಾಕಾರರಿಗೆ ಮನವೊಲಿಸುವಲ್ಲಿ ಕೆಲ ಮಟ್ಟಿಗೆ ಸಫಲವಾದರು.

LIC HFL ವಿದ್ಯಾಧನ್ ಯಿಂದ 20,0000 ವಿದ್ಯಾರ್ಥಿವೇತನ/lic hfl vidyadhan scholarship 2022

ಇನ್ನು ಕೆಲವೇ ದಿನದಲ್ಲಿ ಸಕ್ಕರೆ ಸಚಿವರೊಂದಿಗೆ ಸಭೆಯನ್ನು ನಡೆಸಿ ಈ ಸಮಸ್ಯೆಗೆ ಶೀಘ್ರವಾಗಿ ಪರಿಹಾರವನ್ನು ಕೊಡುತ್ತೇವೆ ಎಂದು ಭರವಸೆಯನ್ನು ನೀಡಿದರು. ಆದರೂ ಕೂಡ ನಾವು ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹಾಗೂ ಸಮಸ್ಯೆ ಬಗೆ ಹರಿಯುವ ವರೆಗೆ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಲು ಬಿಡುವುದಿಲ್ಲ ಎಂದು ಕಬ್ಬು ಬೆಳಗಾರರ ಸಂಘದವರು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಉಡಚಪ್ಪ ಬೋಬಾಟಿ, ಎಸ್. ಕೆ ಗೌಡಾ, ಮಲ್ಲಾರಿ ಘಾಡಿ, ಶಂಕರ ಕಾಜಗಾರ, ಅಶೋಕ್ ಮೇಟಿ,ನಾಗೇಂದ್ರ ಜಿವೋಜಿ, ಪ್ರಕಾಶ್ ಪಾಕ್ರೆ, ಸಂದೀಪ ಗೋಡಿಮಣಿ, ಮಂಜುಳಾ ಪಾಟೀಲ ಇನ್ನೂ ಹಲವಾರು ರೈತ ಮುಖಂಡರು, ಸಾವಿರಾರು ರೈತರು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿಬಂದೋಬಸ್ತ ಮಾಡಲಾಗಿತ್ತು.

ಹಳಿಯಾಳ
ವರದಿ : ಮಂಜುನಾಥ. ಹ. ಮಾದಾರ
07-10-2022

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News

Explore More:

About manjunath maadaar

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ BMRCL New Recruitment 2023 Apply Online for Security officer post

March 27, 2023 By Sachin Hegde

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant

March 24, 2023 By Sachin Hegde

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts

March 23, 2023 By Sachin Hegde

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...