• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಜ್ರಂಭಣೆಯಿಂದ ವಾಲ್ಮೀಕಿ ಜಯಂತಿ ಆಚರಣೆ

October 9, 2022 by manjunath maadaar Leave a Comment

  • IMG 20221009 WA0167
  • IMG 20221009 WA0168

ಹಳಿಯಾಳ : ತಾಲೂಕು ಆಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಳಿಯಾಳ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವದಲ್ಲಿ ಮಾನ್ಯ ಶಾಸಕರಾದ ಆರ್. ವಿ. ದೇಶಪಾಂಡೆ ಭಾಗಿಯಾಗಿ ಭಕ್ತಿ ಪೂರ್ವಕವಾಗಿ ಪುಷ್ಪನಮನಗಳನ್ನು ಅರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಡೊಳ್ಳು ಕುಣಿತ, ಕೋಲಾಟ, ಭಜನಾಪದಗಳು ಜನ ಮನ ಸೆಳೆಯಿತು.

ತದ ನಂತರ ತಹಸೀಲ್ದಾರ ಕಚೇರಿ ಸಭಾ ಭವನದಲ್ಲಿ ಸಭಾ ಕಾರ್ಯಕ್ರಮವನ್ನು ತುಂಬಾ ಅಚ್ಚುಕಟ್ಟಾಗಿ ಸುಂದರವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮೊದಲಿಗೆ ಸಮರ್ಥ ಮತ್ತು ತಂಡದವರು ನಾಡಗೀತೆಯನ್ನು ಹಾಡಿದರು. ಸಾವಿತ್ರಿ ಬಣ್ಣಪ್ಪನವರ ಅತಿಥಿಗಳನ್ನು ಸ್ವಾಗತಿಸಿದರು. ನಂತರ ಉದ್ಘಾಟನೆಯನ್ನು ಜ್ಯೋತಿ ಬೆಳಗಿ, ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಎಲ್ಲ ಅತಿಥಿ ಗಣ್ಯರು ಕೂಡಿ ಮಾಡಿದರು. ಉದ್ಘಾಟಕರಾದ ತಹಸೀಲ್ದಾರ ಪ್ರಕಾಶ ಗಾಯಕ್ವಾಡ ರವರು ಮಾತನಾಡಿ ಜನರು ಸರ್ಕಾರ ಕೊಟ್ಟಂತಹ ಎಲ್ಲಾ ಸೌಲಭ್ಯಗಳ ಉಪಯೋಗವನ್ನು ಪಡೆದುಕೊಂಡು ಸಮಾಜದಲ್ಲಿ ಮೇಲೆ ಬರಬೇಕು ಮತ್ತು ಸಮಾಜಕ್ಕೆ ಕೊಡುಗೆಯನ್ನು ಕೊಡಬೇಕು ಎಂದರು.

ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೇ ಮಾತನಾಡಿ ರಾಮಾಯಣದಲ್ಲಿ ಇಡೀ ಸಮಾಜದ ಎಲ್ಲ ಪಾತ್ರಗಳು ಕಾಣುತ್ತವೆ. ಮನುಕುಲದ ಒಳಿತಿಗಾಗಿ ರಾಮಾಯಣವನ್ನು ಬರೆಯಲಾಗಿದೆ ಎಂದು ಹೇಳಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆದ ಪರಶುರಾಮ ಸಿಂಧೆ ಹಿತವಚನಗಳನ್ನು ನುಡಿದರು.

  • 20221009 115433
  • 20221009 114822
  • 20221009 115623

ಉನ್ಯಾಸಕ ಮೌನೇಶ ಬಾರಿಕೆರ ರವರು ತುಂಬಾ ಸುಂದರವಾಗಿ ಆಳವಾಗಿ ಮಹರ್ಷಿ ವಾಲ್ಮೀಕಿ, ರಾಮಾಯಣ ಹಾಗೂ ಸಮಾಜದ ಸ್ಥಿತಿಗತಿಗಳ ಬಗ್ಗೆ ಉಪನ್ಯಾಸವನ್ನು ನೀಡುವುದರ ಮೂಲಕ ಎಲ್ಲರ ಮನ ಸೆಳೆದರು. ನಂತರ ಶಾಲೆ ಮತ್ತು ಕಾಲೇಜುಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಸನ್ಮಾನವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಲಕ್ಷ್ಮೀದೇವಿ, ಗ್ರೇಡ್-2 ತಹಸೀಲ್ದಾರ ಜಿ. ಕೆ. ರತ್ನಾಕರ, ಸಾವಿತ್ರಿ, ಪುರಸಭೆ ಸದಸ್ಯರಾದ ಶಮೀಮಾ ಜಂಬೂವಾಲೆ, ಮೋಹನ ಮೇಲಗಿ, ಸಮಾಜದ ಮುಖಂಡರಾದ ಜಯಶ್ರೀ ವಾಲ್ಮೀಕಿ, ಫಕ್ಕೀರವ್ವ, ಕರಿಯಪ್ಪ ನಾಯಕ, ಬಸವ್ವಾ ನಾಯಕ, ಸಂತೋಷ ನಾಯಕ, ಸಮಾಜದ ಎಲ್ಲ ಹಿರಿಯರು ಮಕ್ಕಳು ಪಾಲ್ಗೊಂಡಿದ್ದರು.

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್

  • 20221009 124700
  • 20221009 115814
  • 20221009 123954
  • 20221009 115955

ಹಳಿಯಾಳ
ವರದಿ : ಮಂಜುನಾಥ. ಹ. ಮಾದಾರ
09-10-2022

10 th /ITI ಪಾಸಾದವರಿಗೆ ದಕ್ಷಿಣ ರೈಲ್ವೆಯಲ್ಲಿ ನೇಮಕಾತಿ/Southern Railway Recruitment 2022

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News

Explore More:

About manjunath maadaar

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...