• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

ಅಂತರರಾಜ್ಯ ದರೋಡೆಕೊರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು 2022

November 30, 2022 by Jayaraj Govi Leave a Comment

ಅಂತರರಾಜ್ಯ ದರೋಡೆಕೊರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು

ಅಂತರರಾಜ್ಯ ದರೋಡೆಕೊರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು

ಅಂತರರಾಜ್ಯ ದರೋಡೆಕೊರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು

ಯಲ್ಲಾಪುರ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್‌ ಬಳಿ ಕಾರನ್ನು ಅಡ್ಡಗಟ್ಟಿ, ಕಾರು ಸಮೇತ 2.11 ಕೋಟಿ ರೂ. ದರೋಡೆ ಮಾಡಿದ್ದ ಅಂತರ ರಾಜ್ಯ ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


ಅ.02 ರಂದು ಮಧ್ಯರಾತ್ರಿ 1.30 ರ ಹೊತ್ತಿಗೆ ತಾಲೂಕಿನ ಅರಬೈಲ್‌ ಗ್ರಾಮದ ಬಳಿ ಕೊಲ್ಲಾಪುರದ ಗಡಗ್ಲಾಂಜ್ ನಿವಾಸಿ ನಿಲೇಶ ಪಾಂಡುರಂಗ ನಾಯ್ಕ ಎಂಬುವವರು ಕಾರಿನಲ್ಲಿ ಸಂಚರಿಸುತ್ತಿರವಾಗ 7-8 ಜನರ ತಂಡವೊಂದು ಎರಡು ಕಾರುಗಳಲ್ಲಿ ಬಂದು, ದೂರುದಾರರ ಕಾರನ್ನು ಅಡ್ಡಗಟ್ಟಿ, ಅವರ ಮೇಲೆ ಹಲ್ಲೆ ಮಾಡಿ ಸುಮಾರು 2 ಲಕ್ಷ ಬೆಲೆ ಬಾಳುವ ಸ್ವೀಪ್ ವಿ.ಡಿ.ಐ ಕಾರ್‌, ಕಾರಿನಲ್ಲಿದ್ದ 2,11,86,000 ರೂಪಾಯಿ ಹಣವನ್ನು ಹಾಗೂ ಸುಮಾರು 10,000 ರೂಪಾಯಿ ಬೆಲೆ ಬಾಳುವ ಎರಡು ಮೊಬೈಲ್ ಫೋನಗಳನ್ನು ದರೋಡೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.


ಪ್ರಕರಣದ ಬೆನ್ನು ಹತ್ತಿದ ಯಲ್ಲಾಪುರ ಪೊಲೀಸರು, ಕೇರಳದಲ್ಲಿ ತನಿಖೆ ನಡೆಸಿ ಪ್ರಕರಣದಲ್ಲಿ ಆರೋಪಿತರಾದ, ಕೇರಳ ರಾಜ್ಯದ ಕಾಸರಗೋಡ್‌ನ ಮಹ್ಮದ ಕಬೀರ್ ಮೈನುದ್ದೀನ್ ಹಾಜಿ, ಪಾಲಕ್ಕಾಡ ಜಿಲ್ಲೆಯ ಕೋಜಿಕೋಡಿಯ ಸುಭಾಸ್ ರಾಧಾಕೃಷ್ಣನ್‌, ಪಾಲಕ್ಕಾಡ ಜಿಲ್ಲೆಯ ಐಲೂರಿನ ಸಕಯ್ಯಪ್ಪನಚೇರಿಯ ನಿಮೇಶ ವಿಜಯ ಕೃಷ್ಣನ್‌ ಎನ್ನುವ ಮೂವರು ಆರೋಪಿತರನ್ನು ಬಂಧಿಸಿರುತ್ತಾರೆ.

ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ ಮಹಿಂದ್ರಾ ಮೊರೆಜೋ ಕಾರು, ಮಾರುತಿ ಬ್ರೆಝಾ ಹಾಗೂ ದರೋಡೆ ಮಾಡಿಕೊಂಡು ಹೋದ ಸ್ವೀಪ್ ವಿ.ಡಿ.ಐ ಕಾರ್ ಹಾಗೂ 98.000/- ರೂ ಹಣ ಸೇರಿದಂತೆ, ಒಟ್ಟು 19,98,000/- ಬೆಲೆಯ ಸ್ವತ್ತನ್ನು ಜಪ್ತುಪಡಿಸಿಕೊಳ್ಳಲಾಗಿದೆ.

ಅಂತರರಾಜ್ಯ ದರೋಡೆಕೊರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು


ಇನ್ನುಳಿದ ಆರೋಪಿಗಳು ತಲೆಮರಿಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಎಸ್.ಪಿ. ವಿಷ್ಣುವರ್ದನ್ ಎನ್, ಡಿವೈಎಸ್‌ಪಿ ರವಿ ನಾಯ್ಕ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಸುರೇಶ ಯಳ್ಳೂರ ಇವರ ನೇತೃತ್ವದಲ್ಲಿ ಪಿ.ಎಸ್.ಐಗಳಾದ ಮಂಜುನಾಥ ಗೌಡ‌ರ್, ಅಮೀನಸಾಬ್ ಅತ್ತಾರ, ಪ್ರೊ. ಪಿ.ಎಸ್.ಐ ಉದಯ, ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ಮಹ್ಮದ ಶಫೀ, ದೀಪಕ್ ನಾಯ್ಕ, ಗಜಾನನ ನಾಯ್ಕ, ಡ್ಯಾನಿ ಪರ್ನಾಂಡೀಸ್, ರಾಜೇಶ ನಾಯಕ, ಪರಶುರಾಮ ಕಾಳೆ, ಪ್ರವೀಣ ಪೂಜಾರ, ಚನ್ನಕೇಶವ, ಗಿರೀಶ, ನಂದೀಶ, ಸಕ್ರಪ್ಪ, ಶೇಷು, ವಿಜಯ ಹಾಗೂ ಮಹಿಳಾ ಸಿಬ್ಬಂದಿ ಶೋಭಾ ನಾಯ್ಕ, ಹಾಗೂ ಸಿ.ಡಿ.ಆರ್ ಸೆಲ್ ವಿಭಾಗದ ಉದಯ, ರಮೇಶ ಹಾಗೂ ಮಡಿಕೇರಿ ಜಿಲ್ಲೆಯ ಸಿಬ್ಬಂದಿ ಯೋಗೇಶ ಆರೋಪಿತರನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ವೈಜ್ಞಾನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

June 4, 2023 By Sachin Hegde

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

June 4, 2023 By Sachin Hegde

ವಿವಿಧ ಹುದ್ದೆಗಳಿಗೆ ನೇಮಕಾತಿ 

June 4, 2023 By Sachin Hegde

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...