ಹೊನ್ನಾವರ:
ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ.
ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯ ಕೈ-ಕಾಲು ಹಾಗೂ ಎದೆ ಭಾಗಕ್ಕೆ ಬಲವಾದ ಗಾಯವಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮಹಾರಾಷ್ಟ್ರ ಮೂಲದ ಲಾರಿ ಚಾಲಕ ಸಂದೀಪ ಖಬನ್ ಮೂನೆ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
Leave a Comment