• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು

June 8, 2017 by Sachin Hegde Leave a Comment

ಕಾರವಾರ:

ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು ಅವಕಾಶಗಳಿದ್ದರೂ ಆ ಬಗ್ಗೆ ಸರ್ಕಾರ ಗಮನ ನೀಡಿಲ್ಲ. ಕದಂಬ ನೌಕಾನೆಲೆ ಸ್ಥಾಪನೆಯಿಂದ ನಿರಾಶ್ರಿತರಾದವರಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೂ ರಾಜ್ಯ ಸರ್ಕಾರ ಅದನ್ನು ವಿಲೆವಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಬಡ ಜನರ ಬಗ್ಗೆ ಕಾಳಜಿ ಇಲ್ಲ. ಅಭಿವೃದ್ದಿ ವಿರೋಧಿ ದೋರಣೆ ಹೊಂದಿರುವ ರಾಜ್ಯ ಸರ್ಕಾರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವನ್ನು ನಡೆಸಿಲ್ಲ ಎಂದು ಆರೋಪಿಸಿದರು. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಕಾರವಾರಕ್ಕೆ ಮೆಡಿಕಲ್ ಕಾಲೇಜು ಮಂಜೂರಿ ಮಾಡಲಾಗಿತ್ತು. ನಂತರ ಅಧಿಕಾರ ಹಿಡಿದ ಕಾಂಗ್ರೆಸ್ ಅದನ್ನು ಸರಿಯಾಗಿ ಕೆಲಸ ಮಾಡಿಲ್ಲ. ಮೆಡಿಕಲ್ ಕಾಲೇಜು ನಿರ್ಮಾಣ ಕೆಲಸ ತೃಪ್ತಿಕರವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಜಿಲ್ಲೆಯ ಜನ ಕಸ್ತೂರಿ ರಂಗನ್ ವರದಿ ಜಾರಿಯ ಗೊಂದಲದಲ್ಲಿದ್ದಾರೆ. ಯಾವದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡುವದಿಲ್ಲ. ಅತಿಕ್ರಮಣದಾರರ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ ಎಂದು ದೂರಿದರು. ಅತಿಕ್ರಮಣದಾರರ ಪರವಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಸಂಬಂಧಿಸಿದ ಮಂತ್ರಿಗಳಿಗೆ ಸಮಸ್ಯೆಯ ಗಂಭೀರತೆ ಕುರಿತು ಮನವರಿಕೆ ಮಾಡಿಕೊಡಲಿದೆ ಎಂದು ಹೇಳಿದರು. ಅಡಿಕೆ ಹಾಗೂ ತೆಂಗಿನ ಬೆಳೆ ನಷ್ಟದಲ್ಲಿದ್ದು ಸರ್ಕಾರ ಈ ಬಗ್ಗೆ ಯೋಚನೆ ಮಾಡಿಲ್ಲ. ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ ಸಿದ್ದರಾಮಯ್ಯನವರ ಸರ್ಕಾರ ಸಾಲಮನ್ನಾದ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು. ಬರಗಾಲದ ಸಮಸ್ಯೆಗಳ ಬಗ್ಗೆ ಸರ್ಕಾರ ಜನವಿರೋಧಿ ನೀತಿ ಅನುಸರಿಸಿದೆ ಎಂದು ಆರೋಪಿಸಿದರು. ಇನ್ನು ಸಾಗರಮಾಲಾ ಯೋಜನೆ ಅಡಿ ಬಂದರುಗಳಿಗೆ ರೈಲ್ವೇ ಸಂಪರ್ಕ ನೀಡುವದು, ಹುಬ್ಬಳ್ಳಿ-ಅಂಕೋಲಾ ರೈಲು ನಿರ್ಮಾಣ ಯೋಜನೆಗೆ ಒತ್ತು ನೀಡುವದು ಸೇರಿದಂತೆ ವಿವಿಧ ಕೆಲಸಗಳಿಗೆ ಕೇಂದ್ರ ಸರ್ಕಾರ ಸಿದ್ದವಾಗಿದೆ ಎಂದರು. ಮುಂದಿನ ಚುನಾವಣೆಯಲ್ಲಿ 150ಕ್ಕೂ ಅಧಿಕ ಬಿಜೆಪಿ ಸದಸ್ಯರು ಆಯ್ಕೆಯಾಗಲಿದ್ದು, ಬಿಜೆಪಿ ಪಕ್ಷ ಜನಾಭಿಪ್ರಾಯದೊಂದಿಗೆ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ ಎಂದ ಅವರು ಯಾರೇ ಅಭ್ಯರ್ಥಿ ಆದರೂ ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ವೇದಿಕೆಯಲ್ಲಿ ಪದ್ಮಶ್ರಿ ಪುರಸ್ಕøತ ಸುಕ್ರಿ ಗೌಡ, ಮಹಿಳಾ ಗುತ್ತಿಗೆದಾರ ಸತ್ಯಕ್ಕ ಪೂಜಾರ್, ಸಾಧಕ ಎಂ.ಬಿ.ಎ ವಿದ್ಯಾರ್ಥಿ ಅಣ್ಣಪ್ಪ ಸಿದ್ದಿ ಹಾಗೂ ಪೌರ ಕಾರ್ಮಿಕರನ್ನು ಸನ್ಮಾನಿಸಿದರು. ಸಂಸದ ಅನಂತಕುಮಾರ ಹೆಗಡೆ, ಪ್ರಮುಖರಾದ ಕುಮಾರ ಬಂಗಾರಪ್ಪ ಮಾತನಾಡಿದರು. ವಿವಿಧ ಕ್ಷೇತ್ರದ ಮಾಜಿ ಶಾಸಕರಾದ ವಿ.ಎಸ್. ಪಾಟೀಲ್, ದಿನಕರ ಶೆಟ್ಟಿ, ಸುನಿಲ ಹೆಗಡೆ, ಜೆ.ಡಿ ನಾಯ್ಕ, ಶಿವಾನಂದ ನಾಯ್ಕ ಇನ್ನಿತರ ಗಣ್ಯರು ವೇದಿಕೆಯಲ್ಲಿದ್ದರು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಸ್ತಾಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆಜಿ ನಾಯ್ಕ ಸ್ವಾಗತಿಸಿದರು. ಮಹಿಳಾ ಮೋರ್ಚಾದ ರೂಪಾಲಿ ನಾಯ್ಕ ಸಂಘಟಿಸಿದ್ದರು. ಪಕ್ಷದ ನಗರಾಧ್ಯಕ್ಷ ಮನೋಜ ಭಟ್ಟ ವಂದಿಸಿದರು.

18835674 10211564046889473 4311931779588689170 n

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: Karwar, ಉತ್ತರ ಕನ್ನಡ, ಉದ್ಘಾಟಿಸಿದರು, ಕಸ್ತೂರಿ ರಂಗನ್, ಕಾಂಗ್ರೆಸ್, ಕಾರವಾರ, ಕಾಲೇಜು, ಕಿಂಚಿತ್ತು, ಕೈಗಾರಿಕೆ, ಜಿಲ್ಲೆ, ಜ್ವಲಂತ, ತೆಂಗಿನ ಬೆಳೆ, ಬಿ.ಎಸ್., ಬಿಜೆಪಿ, ಮಹಾರಾಷ್ಟ್ರ, ಮಾಜಿ, ಮಾಲಾದೇವಿ, ಮುಖ್ಯಮಂತ್ರಿ, ಮೆಡಿಕಲ್, ಮೈದಾನ, ಯಡಿಯೂರಪ್ಪ, ವಿದ್ಯುತ್, ವೈಪಲ್ಯ, ಸಣ್ಣ, ಸಭೆ, ಸಮಸ್ಯೆ, ಸರ್ಕಾರ, ಸಾರ್ವಜನಿಕ, ಸಾಲ ಮನ್ನಾ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...