ಯಲ್ಲಾಪುರ : ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಸ್ಕೇಟಿಂಗ್ ಮೂಲಕವಾಗಿ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ವಿಧಾನಸೌಧದ ಮುಂಭಾಗದಲ್ಲಿ ಸ್ವಾಗತಿಸಿದರು.ಯಲ್ಲಾಪುರದ 9 ಮಕ್ಕಳು ಸೇರಿದಂತೆ 63 ಮಕ್ಕಳು ಕಾರವಾರದಿಂದ 620 ಕಿಲೋಮೀಟರ್ ಸ್ಕೇಟಿಂಗ್ ಮೂಲಕ ಬೆಂಗಳೂರು ತಲುಪಿದ್ದು, ಸಚಿವರು ಮಕ್ಕಳಿಗೆ ಅಭಿನಂದನಾ ಪತ್ರವನ್ನು ವಿತರಿಸಿದರು.ಈ ಸಂದರ್ಭದಲ್ಲಿ ರೇಷ್ಮೆ, ಯುವ ಸಬಲೀಕರಣ … [Read more...] about ಸ್ಕೇಟಿಂಗ ಮೂಲಕ ಬೆಂಗಳೂರು ತಲುಪಿದ ಜಾಗೃತಿ ಜಾಥಾ
Yellapur
ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಉದ್ಘಾಟನೆ
ಯಲ್ಲಾಪುರ :ಮಹಾಮಾರಿ ಕರೋನಾದಿಂದಎರಡು ವರ್ಷಗಳ ಕಾಲ ನಮ್ಮಮಕ್ಕಳ ಕಲಿಕೆಯಲ್ಲಾದ ನಷ್ಟವನ್ನು ತುಂಬುವ ಉದ್ದೇಶದಿಂದ ನಮ್ಮ ಶಿಕ್ಷಣ ಇಲಾಖೆಯು ಜಾರಿಗೆ ತಂದ ವಿನೂತನ ಯೋಜನೆಯೇ ಈ "ಕಲಿಕಾ ಚೇತರಿಕೆ"ಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಹೇಳಿದರುಅವರು ಬುಧವಾರ ಪಟ್ಟಣದ ಮಾದರಿ ಉರ್ದುಶಾಲೆಯಲ್ಲಿ ಶಿಕ್ಷಣ ಇಲಾಖೆಯ "ಕಲಿಕಾ ಚೇತರಿಕೆ" ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿಶಿಬಿರಾರ್ಥಿಗಳಿಗೆ ಕಲಿಕಾ ಚೇತರಿಕೆಯ ಉದ್ದೇಶ, ಮತ್ತು ಅದರ ಮಹತ್ವವನ್ನು … [Read more...] about ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಉದ್ಘಾಟನೆ
ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕೆಂದು ಸಚಿವ ಹೆಬ್ಬಾರ್ ಗೆ ಮನವಿ
ಯಲ್ಲಾಪುರ : ತಾಲ್ಲೂಕಿನ ಮಾವಿನಮನೆ ಮಲವಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಮಲವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರು ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.ಕಳೆದ ಒಂದು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮಾವಿನಮನೆ- ಮಲವಳ್ಳಿಯ ಪ್ರಭಾರೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಅಂಕದ ಅವರನ್ನು ಏಕಾಏಕಿ ತಾಲ್ಲೂಕಿನಿಂದ ಹೊರಗೆ ವರ್ಗಾವಣೆ ಮಾಡಲಾಗಿರುತ್ತದೆ. … [Read more...] about ಗ್ರಾಮ ಪಂಚಾಯ್ತಿ ಪಿಡಿಓ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕೆಂದು ಸಚಿವ ಹೆಬ್ಬಾರ್ ಗೆ ಮನವಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಬೇಸಿಗೆ ಶಿಬಿರ
ಯಲ್ಲಾಪುರ: ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜನೆಗೊಂಡ ಮಕ್ಕಳ ಬೇಸಿಗೆ ಶಿಬಿರಕಾರ್ಯಕ್ರಮ ದಲ್ಲಿ ಪಪಂ ಅಧ್ಯಕ್ಷೆ ಸುನಂದ ದಾಸ್ ಮಾತನಾಡಿ ನಾವು ಸಣ್ಣವರಾಗಿದ್ದಾಗ ಶಾಲೆಯ ಬಿಡುವು ದೊರಕಿತೆಂದರೆ, ಬೇಸಿಗೆಯ ಬಿರು ಬಿಸಿಲನ್ನು ಲಕ್ಷಿಸದೆ ಸಂಬAಧಿಕರ ಮನೆಗಳ ಭೇಟಿ: ನದಿ, ಹಳ್ಳ, ಕೊಳ್ಳಗಳಲ್ಲಿ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಬೇಸಿಗೆ ಶಿಬಿರ
ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ
ಯಲ್ಲಾಪುರ: ಎಲ್ಲಾ ವೇದ ಹಾಗೂ ಧರ್ಮಗಳು ಸಾಮಾಜಿಕ ಸಹಬಾಳ್ವೆಯ ವಿಷಯವನ್ನು ಸಾರಿವೆ. ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟçಪ್ರೇಮ, ಸಾಮಾಜಿಕ ಕಳಕಳಿ ಮೊದಲಾದ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡವರು ಉತ್ತಮ ಪ್ರಜೆಯಾಗುತ್ತಾರೆ ಎಂದು ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ದೆಹಲಿ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದ ನಿವೃತ್ತ ಸಲಹೆಗಾರಾದ ಸಿ ವಿ ಗೋಪಿನಾಥ ಹೇಳಿದರು.ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್ … [Read more...] about ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ




