ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಆರೋಗ್ಯ
ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ
ಕಾರವಾರ:ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆಯಾಗಿದೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆಯಲ್ಲಿ ಜೇನುಗೂಡು ಬಳಗ ಪ್ರಶಸ್ತಿಗೆ ಭಾಜನವಾಯಿತು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ವಿವಿಧ … [Read more...] about ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ
ವಿಷನ್ 2025 ಡಾಕ್ಯುಮೆಂಟ್
ಕಾರವಾರ:ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರ ರೂಪಿಸಲು ಉದ್ದೇಶಿಸಿರುವ `ವಿಷನ್ 2025 ಡಾಕ್ಯುಮೆಂಟ್' ಮಾಹಿತಿ ಸಂಗ್ರಹ ಕಾರ್ಯಾಗಾರ ಅ.17ರಂದು ಕಾರವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಶನಿವಾರ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಕರ್ನಾಟಕ ರಾಜ್ಯದ … [Read more...] about ವಿಷನ್ 2025 ಡಾಕ್ಯುಮೆಂಟ್
ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ. ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು … [Read more...] about ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ