ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು
ಸಂಗೀತ ಸಂಜೆ
ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ
ಕಾರವಾರ: ಅಂಕೋಲಾದ ಪಿ.ಎಂ. ಪ್ರೌಢಶಾಲೆಯ ರೈತ ಭವನದಲ್ಲಿ ಈಚೆಗೆ ಕೆನರಾ ವೆಲ್ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಾಹಿತಿ ವಿಷ್ಣು ನಾಯ್ಕ, ಜನ ಜೀವನದ ಸೊಬಗು ಇರುವುದು ಸಂಗೀತದಲ್ಲಿ. ಸಂಗೀತದಲ್ಲಿನ ಸಾಹಿತ್ಯ ಜೀವನಕ್ಕೆ ಸ್ಪೂರ್ತಿ ನೀಡುತ್ತದೆ ಎಂದರು. ಕೆನರಾ ವೆಲ್ಫೇರ್ ಟ್ರಸ್ಟ್ನ ಆಡಳಿತಾಧಿಕಾರಿ ಕೃಷ್ಣಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. … [Read more...] about ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ